Andolana originals

ಓದುಗರ ಪತ್ರ: ಸೇತುವೆ ದುರಸ್ತಿಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ.

ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದೇ ಇದೇ ಸೇತುವೆ ಮೇಲೆ ಓಡಾಡಬೇಕಿದೆ.

ಈ ಗುಂಡಿ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದಾಗ್ಯೂ ಗ್ರಾಮ ಪಂಚಾಯಿತಿಯವರು ಗುಂಡಿ ಮುಚ್ಚುವುದಕ್ಕಾಗಲಿ ಅಥವಾ ಸೇತುವೆಯನ್ನು ಮರು ನಿರ್ಮಾಣ ಮಾಡುವುದಕ್ಕಾಗಲಿ ಮುಂದಾಗಿಲ್ಲ. ಈ ಬಗ್ಗೆ ನೀರಾವರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಸೇತುವೆಯೇ ಕುಸಿದು ಬೀಳುವ ಅಪಾಯದಲ್ಲಿದೆ. ಆದ್ದರಿಂದ ಈ ಕ್ಷೇತ್ರದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆಯನ್ನು ದುರಸ್ತಿ ಮಾಡಿಸಿಕೊಡಬೇಕಿದೆ.

-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ

 

ಆಂದೋಲನ ಡೆಸ್ಕ್

Recent Posts

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

3 mins ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

11 mins ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

14 mins ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

41 mins ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

43 mins ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

1 hour ago