ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ.
ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದೇ ಇದೇ ಸೇತುವೆ ಮೇಲೆ ಓಡಾಡಬೇಕಿದೆ.
ಈ ಗುಂಡಿ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದಾಗ್ಯೂ ಗ್ರಾಮ ಪಂಚಾಯಿತಿಯವರು ಗುಂಡಿ ಮುಚ್ಚುವುದಕ್ಕಾಗಲಿ ಅಥವಾ ಸೇತುವೆಯನ್ನು ಮರು ನಿರ್ಮಾಣ ಮಾಡುವುದಕ್ಕಾಗಲಿ ಮುಂದಾಗಿಲ್ಲ. ಈ ಬಗ್ಗೆ ನೀರಾವರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಸೇತುವೆಯೇ ಕುಸಿದು ಬೀಳುವ ಅಪಾಯದಲ್ಲಿದೆ. ಆದ್ದರಿಂದ ಈ ಕ್ಷೇತ್ರದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆಯನ್ನು ದುರಸ್ತಿ ಮಾಡಿಸಿಕೊಡಬೇಕಿದೆ.
-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…