ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ.
ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದೇ ಇದೇ ಸೇತುವೆ ಮೇಲೆ ಓಡಾಡಬೇಕಿದೆ.
ಈ ಗುಂಡಿ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದಾಗ್ಯೂ ಗ್ರಾಮ ಪಂಚಾಯಿತಿಯವರು ಗುಂಡಿ ಮುಚ್ಚುವುದಕ್ಕಾಗಲಿ ಅಥವಾ ಸೇತುವೆಯನ್ನು ಮರು ನಿರ್ಮಾಣ ಮಾಡುವುದಕ್ಕಾಗಲಿ ಮುಂದಾಗಿಲ್ಲ. ಈ ಬಗ್ಗೆ ನೀರಾವರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಸೇತುವೆಯೇ ಕುಸಿದು ಬೀಳುವ ಅಪಾಯದಲ್ಲಿದೆ. ಆದ್ದರಿಂದ ಈ ಕ್ಷೇತ್ರದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆಯನ್ನು ದುರಸ್ತಿ ಮಾಡಿಸಿಕೊಡಬೇಕಿದೆ.
-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…