Andolana originals

ಓದುಗರ ಪತ್ರ: ಸೇತುವೆ ದುರಸ್ತಿಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ.

ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದೇ ಇದೇ ಸೇತುವೆ ಮೇಲೆ ಓಡಾಡಬೇಕಿದೆ.

ಈ ಗುಂಡಿ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದಾಗ್ಯೂ ಗ್ರಾಮ ಪಂಚಾಯಿತಿಯವರು ಗುಂಡಿ ಮುಚ್ಚುವುದಕ್ಕಾಗಲಿ ಅಥವಾ ಸೇತುವೆಯನ್ನು ಮರು ನಿರ್ಮಾಣ ಮಾಡುವುದಕ್ಕಾಗಲಿ ಮುಂದಾಗಿಲ್ಲ. ಈ ಬಗ್ಗೆ ನೀರಾವರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಸೇತುವೆಯೇ ಕುಸಿದು ಬೀಳುವ ಅಪಾಯದಲ್ಲಿದೆ. ಆದ್ದರಿಂದ ಈ ಕ್ಷೇತ್ರದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆಯನ್ನು ದುರಸ್ತಿ ಮಾಡಿಸಿಕೊಡಬೇಕಿದೆ.

-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

25 mins ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

12 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

13 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

14 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

18 hours ago