ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ ಎತ್ತಿನ ಗಾಡಿ, ದನಕರುಗಳು ಹಾಗೂ ಇತರೆ ವಾಹನಗಳು ಗ್ರಾಮವನ್ನು ಬಳಸಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ರೈತರಿಗೆ ಹೊಲಗದ್ದೆಗಳಿಗೆ ತೆರಳಲು ಸುತ್ತಿ ಬಳಸಿ ಬರಬೇಕಾಗಿದೆ.
ಸೇತುವೆಯನ್ನು ದುರಸ್ತಿ ಪಡಿಸಲು ಶಾಸಕರು ಹಾಗೂ ಎಚ್.ಡಿ. ಕೋಟೆ ತಾರಕ ಮತ್ತು ಹೆಬ್ಬಾಳ ನಾಲಾ ವಿಭಾಗ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟವರು ಕೂಡಲೇ ಸೇತುವೆಯನ್ನು ದುರಸ್ತಿ ಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…