ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ ಎತ್ತಿನ ಗಾಡಿ, ದನಕರುಗಳು ಹಾಗೂ ಇತರೆ ವಾಹನಗಳು ಗ್ರಾಮವನ್ನು ಬಳಸಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ರೈತರಿಗೆ ಹೊಲಗದ್ದೆಗಳಿಗೆ ತೆರಳಲು ಸುತ್ತಿ ಬಳಸಿ ಬರಬೇಕಾಗಿದೆ.
ಸೇತುವೆಯನ್ನು ದುರಸ್ತಿ ಪಡಿಸಲು ಶಾಸಕರು ಹಾಗೂ ಎಚ್.ಡಿ. ಕೋಟೆ ತಾರಕ ಮತ್ತು ಹೆಬ್ಬಾಳ ನಾಲಾ ವಿಭಾಗ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟವರು ಕೂಡಲೇ ಸೇತುವೆಯನ್ನು ದುರಸ್ತಿ ಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…