ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ.
ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳು, ಸಭೆಗಳು ನಡೆಯುತ್ತಿದ್ದವು. ಅಲ್ಲದೆ ಬಡ ವರ್ಗದ ಜನರು ಮದುವೆ, ನಾಮಕರಣ, ನಿಶ್ಚಿತಾರ್ಥಗಳನ್ನು ಮಾಡುತ್ತಿದ್ದರು. ಈಗ ಸಮುದಾಯ ಭವನ ಶಿಥಿಲಗೊಂಡು ಜನೋಪಯೋಗದಿಂದ ದೂರಾಗಿದೆ. ಇನ್ನು ಈ ಕಟ್ಟಡದ ಮೇಲ್ಛಾವಣಿಗೆ ಸೀಟ್ಗಳೆಲ್ಲ ತುಕ್ಕು ಹಿಡಿದು ತೂತು ಬಿದ್ದಿವೆ.
ಇದರಿಂದಾಗಿ ಮಳೆ ನೀರು ಸೋರುತ್ತಿದೆ. ಕಟ್ಟಡದ ಗೋಡೆಗಳೂ ಬಿರುಕು ಬಿಟ್ಟಿದ್ದು, ಕುಸಿದುಬೀಳುವ ಅಪಾಯದಲ್ಲಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸಮುದಾಯ ಭವನವನ್ನು ದುರಸ್ತಿಗೊಳಿಸಬೇಕಿದೆ.
-ಸಂಜಯ್, ಹುಣಸೇಕುಪ್ಪೆ ಎಚ್.ಡಿ.ಕೋಟೆ ತಾ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…