Andolana originals

ಓದುಗರ ಪತ್ರ: ಸಮುದಾಯ ಭವನ ದುರಸ್ತಿಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ.

ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳು, ಸಭೆಗಳು ನಡೆಯುತ್ತಿದ್ದವು. ಅಲ್ಲದೆ ಬಡ ವರ್ಗದ ಜನರು ಮದುವೆ, ನಾಮಕರಣ, ನಿಶ್ಚಿತಾರ್ಥಗಳನ್ನು ಮಾಡುತ್ತಿದ್ದರು. ಈಗ ಸಮುದಾಯ ಭವನ ಶಿಥಿಲಗೊಂಡು ಜನೋಪಯೋಗದಿಂದ ದೂರಾಗಿದೆ. ಇನ್ನು ಈ ಕಟ್ಟಡದ ಮೇಲ್ಛಾವಣಿಗೆ ಸೀಟ್‌ಗಳೆಲ್ಲ ತುಕ್ಕು ಹಿಡಿದು ತೂತು ಬಿದ್ದಿವೆ.

ಇದರಿಂದಾಗಿ ಮಳೆ ನೀರು ಸೋರುತ್ತಿದೆ. ಕಟ್ಟಡದ ಗೋಡೆಗಳೂ ಬಿರುಕು ಬಿಟ್ಟಿದ್ದು, ಕುಸಿದುಬೀಳುವ ಅಪಾಯದಲ್ಲಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸಮುದಾಯ ಭವನವನ್ನು ದುರಸ್ತಿಗೊಳಿಸಬೇಕಿದೆ.
-ಸಂಜಯ್, ಹುಣಸೇಕುಪ್ಪೆ ಎಚ್.ಡಿ.ಕೋಟೆ ತಾ.

 

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago