ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ.
ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳು, ಸಭೆಗಳು ನಡೆಯುತ್ತಿದ್ದವು. ಅಲ್ಲದೆ ಬಡ ವರ್ಗದ ಜನರು ಮದುವೆ, ನಾಮಕರಣ, ನಿಶ್ಚಿತಾರ್ಥಗಳನ್ನು ಮಾಡುತ್ತಿದ್ದರು. ಈಗ ಸಮುದಾಯ ಭವನ ಶಿಥಿಲಗೊಂಡು ಜನೋಪಯೋಗದಿಂದ ದೂರಾಗಿದೆ. ಇನ್ನು ಈ ಕಟ್ಟಡದ ಮೇಲ್ಛಾವಣಿಗೆ ಸೀಟ್ಗಳೆಲ್ಲ ತುಕ್ಕು ಹಿಡಿದು ತೂತು ಬಿದ್ದಿವೆ.
ಇದರಿಂದಾಗಿ ಮಳೆ ನೀರು ಸೋರುತ್ತಿದೆ. ಕಟ್ಟಡದ ಗೋಡೆಗಳೂ ಬಿರುಕು ಬಿಟ್ಟಿದ್ದು, ಕುಸಿದುಬೀಳುವ ಅಪಾಯದಲ್ಲಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸಮುದಾಯ ಭವನವನ್ನು ದುರಸ್ತಿಗೊಳಿಸಬೇಕಿದೆ.
-ಸಂಜಯ್, ಹುಣಸೇಕುಪ್ಪೆ ಎಚ್.ಡಿ.ಕೋಟೆ ತಾ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…