ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ವತಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನವು ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಂಡಿದ್ದು, ಸಾರ್ವಜನಿಕ ಉಪಯೋಗದಿಂದ ದೂರಾಗಿದೆ.
ಗ್ರಾಮದಲ್ಲಿನ ಈ ಸಮುದಾಯ ಭವನವನ್ನು ನಿರ್ಮಿಸಿ ಸುಮಾರು 20 ವರ್ಷಗಳಾಗಿದೆ. ಹಿಂದೆ ಈ ಸಮುದಾಯ ಭವನದಲ್ಲಿ ವಿವಿಧ ಕಾರ್ಯಕ್ರಮಗಳು, ಸಭೆಗಳು ನಡೆಯುತ್ತಿದ್ದವು. ಅಲ್ಲದೆ ಬಡ ವರ್ಗದ ಜನರು ಮದುವೆ, ನಾಮಕರಣ, ನಿಶ್ಚಿತಾರ್ಥಗಳನ್ನು ಮಾಡುತ್ತಿದ್ದರು. ಈಗ ಸಮುದಾಯ ಭವನ ಶಿಥಿಲಗೊಂಡು ಜನೋಪಯೋಗದಿಂದ ದೂರಾಗಿದೆ. ಇನ್ನು ಈ ಕಟ್ಟಡದ ಮೇಲ್ಛಾವಣಿಗೆ ಸೀಟ್ಗಳೆಲ್ಲ ತುಕ್ಕು ಹಿಡಿದು ತೂತು ಬಿದ್ದಿವೆ.
ಇದರಿಂದಾಗಿ ಮಳೆ ನೀರು ಸೋರುತ್ತಿದೆ. ಕಟ್ಟಡದ ಗೋಡೆಗಳೂ ಬಿರುಕು ಬಿಟ್ಟಿದ್ದು, ಕುಸಿದುಬೀಳುವ ಅಪಾಯದಲ್ಲಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸಮುದಾಯ ಭವನವನ್ನು ದುರಸ್ತಿಗೊಳಿಸಬೇಕಿದೆ.
-ಸಂಜಯ್, ಹುಣಸೇಕುಪ್ಪೆ ಎಚ್.ಡಿ.ಕೋಟೆ ತಾ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…