ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಅನೇಕದಿನಗಳೇ ಕಳೆದಿದ್ದು, ಭಕ್ತರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.
ಭಕ್ತರಿಗೆ ಪ್ರಸಾದ ಸೇವನೆಯ ಬಳಿಕ ಅನುಕೂಲವಾಗಲಿ ಎಂದು ಇಲ್ಲಿ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಆದರೆ ಈ ಘಟಕ ಅನೇಕ ದಿನಗಳ ಹಿಂದೆಯೇ ಕೆಟ್ಟು ಹೋಗಿದ್ದು, ಕುಡಿಯುವ ನೀರಿಗಾಗಿ ಭಕ್ತರು ಅಕ್ಕಪಕ್ಕದ ಅಂಗಡಿ, ಹೋಟೆಲ್ಗಳನ್ನು ಅವಲಂಬಿಸಬೇಕಾಗಿದೆ. ಅಲ್ಲದೆ ಕೆಲವರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ತಂದು ಬಳಿಕ ಬಾಟಲಿಯನ್ನು ಇಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ.
ಈಗ ಆಷಾಢ ಮಾಸವಾಗಿರುವುದರಿಂದ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆಷಾಢ ಶುಕ್ರವಾರವಂತೂ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾದದ್ದು ಚಾಮುಂಡಿಬೆಟ್ಟ ಆಡಳಿತ ಮಂಡಳಿಯ ಕರ್ತವ್ಯ. ಆದರೆ ಇಲ್ಲಿನ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದರೂ ಅದನ್ನು ರಿಪೇರಿ ಮಾಡಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ.
ಇನ್ನು ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳಲ್ಲದೆ ಮುಂಜಾನೆಯ ನಸುಕಿನ ಕತ್ತಲಿನಲ್ಲಿಯೇ ಭಕ್ತರು ಕಾಡುಪ್ರಾಣಿಗಳು ಮತ್ತು ಕಳ್ಳರ ಆತಂಕದ ನಡುವೆ ಬೆಟ್ಟ ಹತ್ತಬೇಕಾಗಿದೆ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಚಾಮುಂಡಿಬೆಟ್ಟಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…