Andolana originals

ಓದುಗರ ಪತ್ರ| ಚಾಮುಂಡಿಬೆಟ್ಟದಲ್ಲಿರುವ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಅನೇಕದಿನಗಳೇ ಕಳೆದಿದ್ದು, ಭಕ್ತರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಭಕ್ತರಿಗೆ ಪ್ರಸಾದ ಸೇವನೆಯ ಬಳಿಕ ಅನುಕೂಲವಾಗಲಿ ಎಂದು ಇಲ್ಲಿ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಆದರೆ ಈ ಘಟಕ ಅನೇಕ ದಿನಗಳ ಹಿಂದೆಯೇ ಕೆಟ್ಟು ಹೋಗಿದ್ದು, ಕುಡಿಯುವ ನೀರಿಗಾಗಿ ಭಕ್ತರು ಅಕ್ಕಪಕ್ಕದ ಅಂಗಡಿ, ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಅಲ್ಲದೆ ಕೆಲವರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ತಂದು ಬಳಿಕ ಬಾಟಲಿಯನ್ನು ಇಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ.

ಈಗ ಆಷಾಢ ಮಾಸವಾಗಿರುವುದರಿಂದ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆಷಾಢ ಶುಕ್ರವಾರವಂತೂ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾದದ್ದು ಚಾಮುಂಡಿಬೆಟ್ಟ ಆಡಳಿತ ಮಂಡಳಿಯ ಕರ್ತವ್ಯ. ಆದರೆ ಇಲ್ಲಿನ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದರೂ ಅದನ್ನು ರಿಪೇರಿ ಮಾಡಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ.

ಇನ್ನು ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳಲ್ಲದೆ ಮುಂಜಾನೆಯ ನಸುಕಿನ ಕತ್ತಲಿನಲ್ಲಿಯೇ ಭಕ್ತರು ಕಾಡುಪ್ರಾಣಿಗಳು ಮತ್ತು ಕಳ್ಳರ ಆತಂಕದ ನಡುವೆ ಬೆಟ್ಟ ಹತ್ತಬೇಕಾಗಿದೆ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಚಾಮುಂಡಿಬೆಟ್ಟಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

21 mins ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

1 hour ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

1 hour ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

1 hour ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

2 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

2 hours ago