Andolana originals

ಓದುಗರ ಪತ್ರ| ಚಾಮುಂಡಿಬೆಟ್ಟದಲ್ಲಿರುವ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಅನೇಕದಿನಗಳೇ ಕಳೆದಿದ್ದು, ಭಕ್ತರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಭಕ್ತರಿಗೆ ಪ್ರಸಾದ ಸೇವನೆಯ ಬಳಿಕ ಅನುಕೂಲವಾಗಲಿ ಎಂದು ಇಲ್ಲಿ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಆದರೆ ಈ ಘಟಕ ಅನೇಕ ದಿನಗಳ ಹಿಂದೆಯೇ ಕೆಟ್ಟು ಹೋಗಿದ್ದು, ಕುಡಿಯುವ ನೀರಿಗಾಗಿ ಭಕ್ತರು ಅಕ್ಕಪಕ್ಕದ ಅಂಗಡಿ, ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಅಲ್ಲದೆ ಕೆಲವರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ತಂದು ಬಳಿಕ ಬಾಟಲಿಯನ್ನು ಇಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ.

ಈಗ ಆಷಾಢ ಮಾಸವಾಗಿರುವುದರಿಂದ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆಷಾಢ ಶುಕ್ರವಾರವಂತೂ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾದದ್ದು ಚಾಮುಂಡಿಬೆಟ್ಟ ಆಡಳಿತ ಮಂಡಳಿಯ ಕರ್ತವ್ಯ. ಆದರೆ ಇಲ್ಲಿನ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದರೂ ಅದನ್ನು ರಿಪೇರಿ ಮಾಡಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ.

ಇನ್ನು ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳಲ್ಲದೆ ಮುಂಜಾನೆಯ ನಸುಕಿನ ಕತ್ತಲಿನಲ್ಲಿಯೇ ಭಕ್ತರು ಕಾಡುಪ್ರಾಣಿಗಳು ಮತ್ತು ಕಳ್ಳರ ಆತಂಕದ ನಡುವೆ ಬೆಟ್ಟ ಹತ್ತಬೇಕಾಗಿದೆ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಚಾಮುಂಡಿಬೆಟ್ಟಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

21 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

21 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

21 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

22 hours ago