Andolana originals

ಓದುಗರ ಪತ್ರ| ಚಾಮುಂಡಿಬೆಟ್ಟದಲ್ಲಿರುವ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಅನೇಕದಿನಗಳೇ ಕಳೆದಿದ್ದು, ಭಕ್ತರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಭಕ್ತರಿಗೆ ಪ್ರಸಾದ ಸೇವನೆಯ ಬಳಿಕ ಅನುಕೂಲವಾಗಲಿ ಎಂದು ಇಲ್ಲಿ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದೆ. ಆದರೆ ಈ ಘಟಕ ಅನೇಕ ದಿನಗಳ ಹಿಂದೆಯೇ ಕೆಟ್ಟು ಹೋಗಿದ್ದು, ಕುಡಿಯುವ ನೀರಿಗಾಗಿ ಭಕ್ತರು ಅಕ್ಕಪಕ್ಕದ ಅಂಗಡಿ, ಹೋಟೆಲ್‌ಗಳನ್ನು ಅವಲಂಬಿಸಬೇಕಾಗಿದೆ. ಅಲ್ಲದೆ ಕೆಲವರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ತಂದು ಬಳಿಕ ಬಾಟಲಿಯನ್ನು ಇಲ್ಲಿಯೇ ಬೀಸಾಡಿ ಹೋಗುತ್ತಿದ್ದಾರೆ.

ಈಗ ಆಷಾಢ ಮಾಸವಾಗಿರುವುದರಿಂದ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆಷಾಢ ಶುಕ್ರವಾರವಂತೂ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಭಕ್ತರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕಾದದ್ದು ಚಾಮುಂಡಿಬೆಟ್ಟ ಆಡಳಿತ ಮಂಡಳಿಯ ಕರ್ತವ್ಯ. ಆದರೆ ಇಲ್ಲಿನ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದರೂ ಅದನ್ನು ರಿಪೇರಿ ಮಾಡಿಸುವಲ್ಲಿ ಆಡಳಿತ ಮಂಡಳಿ ವಿಫಲವಾಗಿದೆ.

ಇನ್ನು ಬೆಟ್ಟದ ಮೆಟ್ಟಿಲುಗಳಿಗೆ ವಿದ್ಯುತ್ ದೀಪಗಳಲ್ಲದೆ ಮುಂಜಾನೆಯ ನಸುಕಿನ ಕತ್ತಲಿನಲ್ಲಿಯೇ ಭಕ್ತರು ಕಾಡುಪ್ರಾಣಿಗಳು ಮತ್ತು ಕಳ್ಳರ ಆತಂಕದ ನಡುವೆ ಬೆಟ್ಟ ಹತ್ತಬೇಕಾಗಿದೆ. ಆದ್ದರಿಂದ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಚಾಮುಂಡಿಬೆಟ್ಟಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

2 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

5 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

8 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

12 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

12 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

12 hours ago