Andolana originals

ಓದುಗರ ಪತ್ರ: ಮ್ಯಾನ್‌ಹೋಲ್ ದುರಸ್ತಿಪಡಿಸಿ

ಮೈಸೂರಿನ ವಿಜಯನಗರದಲ್ಲಿರುವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಸಮೀಪದ ಕನ್ನಡ ಸಾಹಿತ್ಯ ಪರಿಷತ್ ಭವನದ ರಸ್ತೆಯ ಬಳಿ ಮ್ಯಾನ್‌ಹೋಲ್‌ನಿಂದ ಕೊಳಚೆ ನೀರು ಹೊರ ಬರುತ್ತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಐದು- ಆರು ದಿನಗಳಿಂದ ಈ ಮ್ಯಾನ್‌ಹೋಲ್ ಮೂಲಕ ಕೊಳಚೆ ನೀರು ರಸ್ತೆಗೆ ಹರಿ ಯುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು, ರಸ್ತೆಯಲ್ಲಿ ತಿರು ಗಾಡುವ ಸಾರ್ವಜನಿಕರು ಈ ನೀರನ್ನು ತುಳಿದು ಕೊಂಡೇ ದುರ್ವಾಸನೆ ತಾಳಲಾರದೆ ಮೂಗು ಮುಚ್ಚಿ ಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿತ್ಯ ಮುಂಜಾನೆ ಈ ಮ್ಯಾನ್ ಹೋಲ್‌ನಿಂದ ಚರಂಡಿ ನೀರು ಮೇಲೆ ಉಕ್ಕುತ್ತಿದೆ. ಅಲ್ಲದೆ ಈ ನೀರಿನ ಮೇಲೆ ವಾಹನಗಳು ಸಂಚರಿಸುತ್ತಿದ್ದಂತೆಲ್ಲಾ ಆ ನೀರು ಅಕ್ಕ ಪಕ್ಕಕ್ಕೆ ಆರುತ್ತಿದೆ. ಇದರಿಂದಾಗಿ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿದೆ. ಇಂತಹ ಅನೈರ್ಮಲ್ಯದ ವಾತಾವರಣದಿಂದಾಗಿ ರೋಗಗಳು ಉಲ್ಭಣಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಮೈಸೂರು ಮಹಾ ನಗರ ಪಾಲಿಕೆಯವರು ಈ ಬಗ್ಗೆ ಗಮನಹರಿಸಿ ಈ ಮ್ಯಾನ್‌ಹೋಲ್‌ಅನ್ನು ಸರಿಪಡಿ ಸುವ ಮೂಲಕ ಕೊಳಚೆ ನೀರು ರಸ್ತೆಗೆ ಹರಿಯದಂತೆ ನೋಡಿ ಕೊಳ್ಳಬೇಕಿದೆ.

-ಆರ್.ಯಶಸ್, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

31 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

32 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

34 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

36 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

40 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

44 mins ago