ಓದುಗರ ಪತ್ರ
ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು ಕಳೆದ ಐದು-ಆರು ದಿನಗಳಿಂದ ಉಕ್ಕಿ ರಸ್ತೆಗೆ ಹರಿಯುತ್ತಿದ್ದು, ಎಲ್ಲೆಡೆ ದುರ್ನಾತ ಬೀರುತ್ತಿದೆ. ಅದಲ್ಲದೇ ಈ ರಸ್ತೆಯಲ್ಲಿಯೇ ಕೊಂಚ ದೂರದಲ್ಲಿ ಬಸ್ ತಂಗುದಾಣವಿದ್ದು, ಅಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರಿಗೆ ವಾಹನ ಸಂಚಾರದಿಂದ ಚರಂಡಿ ನೀರು ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಆರ್.ಯಶಸ್, ಮೈಸೂರು
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…