Andolana originals

ಓದುಗರ ಪತ್ರ:‌ ಮ್ಯಾನ್ ಹೋಲ್ ದುರಸ್ತಿ ಮಾಡಿ

ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್‌ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು ಕಳೆದ ಐದು-ಆರು ದಿನಗಳಿಂದ ಉಕ್ಕಿ ರಸ್ತೆಗೆ ಹರಿಯುತ್ತಿದ್ದು, ಎಲ್ಲೆಡೆ ದುರ್ನಾತ ಬೀರುತ್ತಿದೆ. ಅದಲ್ಲದೇ ಈ ರಸ್ತೆಯಲ್ಲಿಯೇ ಕೊಂಚ ದೂರದಲ್ಲಿ ಬಸ್ ತಂಗುದಾಣವಿದ್ದು, ಅಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರಿಗೆ ವಾಹನ ಸಂಚಾರದಿಂದ ಚರಂಡಿ ನೀರು ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.

– ಆರ್.ಯಶಸ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

1 hour ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

1 hour ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago