ಓದುಗರ ಪತ್ರ
ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು ಕಳೆದ ಐದು-ಆರು ದಿನಗಳಿಂದ ಉಕ್ಕಿ ರಸ್ತೆಗೆ ಹರಿಯುತ್ತಿದ್ದು, ಎಲ್ಲೆಡೆ ದುರ್ನಾತ ಬೀರುತ್ತಿದೆ. ಅದಲ್ಲದೇ ಈ ರಸ್ತೆಯಲ್ಲಿಯೇ ಕೊಂಚ ದೂರದಲ್ಲಿ ಬಸ್ ತಂಗುದಾಣವಿದ್ದು, ಅಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರಿಗೆ ವಾಹನ ಸಂಚಾರದಿಂದ ಚರಂಡಿ ನೀರು ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
– ಆರ್.ಯಶಸ್, ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…