ಓದುಗರ ಪತ್ರ
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿಕೊಂಡು, ರಸ್ತೆ ಗುರುತಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುವ ಸಾಧ್ಯತೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ತರಗತಿಗಳಿಗೆ, ಪರೀಕ್ಷೆಗಳಿಗೆ ಹಾಗೂ ಕಚೇರಿ ಕೆಲಸಗಳಿಗೆ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ರಸ್ತೆಯ ದುಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ತಲುಪಲಾಗದೆ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಮುಕ್ತ ವಿವಿ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.
-ಎನ್.ಎಚ್. ಮನೋಜ್, ಪತ್ರಿಕೋದ್ಯಮ ಮತ್ತು ಸಂವಹನಾ ಸಮೂಹ ವಿಭಾಗ , ಮಾನಸ ಗಂಗೋತ್ರಿ, ಮೈಸೂರು
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…