Mysore
19
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಓದುಗರ ಪತ್ರ: ರಸ್ತೆ ಡಾಂಬರೀಕರಣ ಮಾಡಿ

ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಾಡಿ, ಕೆ.ಹೆಚ್.ಬಿ. ಕಾಲೋನಿ ಹಾಗೂ ಹೂಟಗಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಒಳಚರಂಡಿ ಪೈಪ್ ಲೈನ್ ದುರಸ್ತಿ ಮಾಡಲು ತೆಗೆದ ಗುಂಡಿಗಳನ್ನು ಕಳೆದ ಎರಡು ವರ್ಷಗಳಿಂದ ಸರಿಯಾಗಿ ಮುಚ್ಚದೆ ಹಾಗೆ ಬಿಟ್ಟಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಹಲವಾರು ಬಾರಿ ಅಪಘಾತಗಳು ನಡೆದು ವಾಹನ ಸವಾರರು ಕೈಕಾಲು ಮುರಿದುಕೊಂಡಿದ್ದಾರೆ. ಈ ಸಮಸ್ಯೆ ಕುರಿತು ಸಾರ್ವಜನಿಕರು ಸ್ಥಳೀಯ ಅಧಿಕಾರಿಗಳ ಗಮನ ಸೆಳೆದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಸದರಿ ರಸ್ತೆಯನ್ನು ಡಾಂಬರೀಕರಣ ಮಾಡಿಸುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಆರ್. ಆದರ್ಶ್, ಡಿ. ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜು, ಮೈಸೂರು

 

 

Tags:
error: Content is protected !!