ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಾಡಿ, ಕೆ.ಹೆಚ್.ಬಿ. ಕಾಲೋನಿ ಹಾಗೂ ಹೂಟಗಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದೆ. ಒಳಚರಂಡಿ ಪೈಪ್ ಲೈನ್ ದುರಸ್ತಿ ಮಾಡಲು ತೆಗೆದ ಗುಂಡಿಗಳನ್ನು ಕಳೆದ ಎರಡು ವರ್ಷಗಳಿಂದ ಸರಿಯಾಗಿ ಮುಚ್ಚದೆ ಹಾಗೆ ಬಿಟ್ಟಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಹಲವಾರು ಬಾರಿ ಅಪಘಾತಗಳು ನಡೆದು ವಾಹನ ಸವಾರರು ಕೈಕಾಲು ಮುರಿದುಕೊಂಡಿದ್ದಾರೆ. ಈ ಸಮಸ್ಯೆ ಕುರಿತು ಸಾರ್ವಜನಿಕರು ಸ್ಥಳೀಯ ಅಧಿಕಾರಿಗಳ ಗಮನ ಸೆಳೆದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಸದರಿ ರಸ್ತೆಯನ್ನು ಡಾಂಬರೀಕರಣ ಮಾಡಿಸುವ ಮೂಲಕ ವಾಹನ ಸವಾರರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಆರ್. ಆದರ್ಶ್, ಡಿ. ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜು, ಮೈಸೂರು
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…