ರಾಷ್ಟ್ರೀಯ ಹೆದ್ದಾರಿ ೭೬೬ ತಿ.ನರಸೀಪುರದ ಮಾರ್ಗವಾಗಿ ಮೈಸೂರು ಹಾಗೂ ಚಾಮರಾಜನಗರದ ಮೂಲಕ ತಮಿಳುನಾಡು ಮತ್ತು ಕೇರಳ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಈ ಹೆದ್ದಾರಿಯಲ್ಲಿ ಮೂಗೂರಿನಿಂದ ಸಂತೇಮರಹಳ್ಳಿವರೆಗೆ ಸಂಚಿರುವ ರಸ್ತೆ ಹಳ್ಳಕೊಳ್ಳಗಳಿಂದ ಕೂಡಿದ್ದು, ಈ ಮಾರ್ಗವಾಗಿ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳು ಸಂಭವಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಗಮನ ಹರಿಸಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕಾಗಿದೆ.
-ಎಸ್. ಕುಮಾರ್, ಮಾವಿನಹಳ್ಳಿ , ಮೈಸೂರು





