ಓದುಗರ ಪತ್ರ
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ವಾಯುವಿಹಾರಕ್ಕೆ ಬರುತ್ತಾರೆ.
ಕ್ರೀಡಾಂಗಣದಲ್ಲಿ ವಿಶ್ರಮಿಸಲು ಅಲ್ಲಲ್ಲಿ ಕಾಂಕ್ರೀಟ್ ಬೆಂಚ್ಗಳನ್ನು ಹಾಕಲಾಗಿದ್ದು, ಕೆಲವು ಬೆಂಚ್ಗಳು ಮುರಿದು ಹೋಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟವರು ಹೊಸದಾಗಿ ಬೆಂಚ್ಗಳನ್ನು ಅಳವಡಿಸಿಲ್ಲ. ಕ್ರೀಡಾಂಗಣದಲ್ಲಿ ಖಾಸಗಿ ಸಂಘ ಸಂಸ್ಥೆಗಳಿಗೆ ಸಮಾರಂಭ ನಡೆಸಲು ಮೈಸೂರು ವಿಶ್ವವಿದ್ಯಾನಿಲಯದವರು ಅವಕಾಶ ನೀಡುತ್ತಿದ್ದು, ಸಮಾರಂಭ ಮುಗಿದ ನಂತರ ಕುಡಿಯುವ ನೀರಿನ ಬಾಟಲಿ ಹಾಗೂ ಊಟ, ತಿಂಡಿಯ ಪ್ಲೇಟ್ಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದರಿಂದ ಕ್ರೀಡಾಂಗಣದಲ್ಲಿ ಕಸದ ರಾಶಿಯೇ ನಿರ್ಮಾಣವಾಗುತ್ತವೆ. ಸಂಬಂಧಪಟ್ಟವರು ಕ್ರೀಡಾಂಗಣದ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು.
-ವಿಜಯಕಾಂತ್, ಮೈಸೂರು
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…