ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ ಕಲ್ಲುಗಳು ಹಾಳಾಗುತ್ತಿವೆ. ಇದರಿಂದ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ.
ಆದ್ದರಿಂದ ಸಂಸದರು, ಶಾಸಕರೂ ಸೇರಿದಂತೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಪಾದಚಾರಿ ಮಾರ್ಗವನ್ನು ದುರಸ್ತಿಪಡಿಸುವ ಮೂಲಕ ಸಾವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





