ಓದುಗರ ಪತ್ರ
ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ ಇರುವುದರಿಂದ ಇಲ್ಲಿನ ಜನರು ರಾತ್ರಿಯ ವೇಳೆ ಬೀದಿ ದೀಪವಿಲ್ಲದೇ ಮನೆಯಿಂದ ಹೊರ ಬರಲು ಭಯಪಡುವಂತಾಗಿದೆ.
ಈ ಬಗ್ಗೆ ನಗರ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೆ ಬೀದಿ ದೀಪದ ಬ್ರಾಕೆಟ್ ಮುರಿದು ಹೋಗಿರುವುದರಿಂದ ಅದನ್ನು ಚಾಮುಂಡೇಶ್ವರಿ ವಿದ್ಯುತ್ ನಿಗಮ(ಸೆಸ್ಕ್)ದವರೇ ಅಳವಡಿಸಬೇಕು ಎಂದು ಹೇಳುತ್ತಾರೆ. ಇತ್ತ ಸೆಸ್ಕ್ನವರಿಗೆ ಹಲವಾರು ಬಾರಿ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಬಡಾವಣೆಯ ಜನರಿಗೆ ರಾತ್ರಿ ವೇಳೆ ಸಂಚರಿಸಲು ತೀವ್ರ ತೊಂದರೆಯಾಗಿದೆ. ಸೆಸ್ಕ್ನವರು ಕೂಡಲೇ ಬೀದಿ ದೀಪವನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಕೆ.ವಿ.ಶ್ರೀನಿವಾಸ್, ಸರಸ್ವತಿ ಪುರಂ, ಮೈಸೂರು
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…