Andolana originals

ಓದುಗರ ಪತ್ರ: ಬೀದಿ ದೀಪ ದುರಸ್ತಿ ಮಾಡಿ

ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ ಇರುವುದರಿಂದ ಇಲ್ಲಿನ ಜನರು ರಾತ್ರಿಯ ವೇಳೆ ಬೀದಿ ದೀಪವಿಲ್ಲದೇ ಮನೆಯಿಂದ ಹೊರ ಬರಲು ಭಯಪಡುವಂತಾಗಿದೆ.

ಈ ಬಗ್ಗೆ ನಗರ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೆ ಬೀದಿ ದೀಪದ ಬ್ರಾಕೆಟ್ ಮುರಿದು ಹೋಗಿರುವುದರಿಂದ ಅದನ್ನು ಚಾಮುಂಡೇಶ್ವರಿ ವಿದ್ಯುತ್ ನಿಗಮ(ಸೆಸ್ಕ್)ದವರೇ ಅಳವಡಿಸಬೇಕು ಎಂದು ಹೇಳುತ್ತಾರೆ. ಇತ್ತ ಸೆಸ್ಕ್‌ನವರಿಗೆ ಹಲವಾರು ಬಾರಿ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಬಡಾವಣೆಯ ಜನರಿಗೆ ರಾತ್ರಿ ವೇಳೆ ಸಂಚರಿಸಲು ತೀವ್ರ ತೊಂದರೆಯಾಗಿದೆ. ಸೆಸ್ಕ್‌ನವರು ಕೂಡಲೇ ಬೀದಿ ದೀಪವನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

– ಕೆ.ವಿ.ಶ್ರೀನಿವಾಸ್, ಸರಸ್ವತಿ ಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

25 mins ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

33 mins ago

ನಾಳೆ ಕೇರಳ, ತಮಿಳುನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.‌11ರಂದು ಪ್ರಧಾನಿ…

34 mins ago

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…

1 hour ago

ಹನೂರು: ಬೆಟ್ಟಳ್ಳಿ ಮಾರಮ್ಮ ದೇವಸ್ಥಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…

2 hours ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…

2 hours ago