ಓದುಗರ ಪತ್ರ
ಮೈಸೂರಿನ ಸರಸ್ವತಿಪುರಂನ 8ನೇ ಮುಖ್ಯ ರಸ್ತೆ, 5ನೇ ಅಡ್ಡ ರಸ್ತೆಯಲ್ಲಿ ಮರದ ಕೊಂಬೆ ಬಿದ್ದು, ಬೀದಿ ದೀಪದ ಕಂಬ ಹಾಳಾಗಿದ್ದು, ಒಂದು ವರ್ಷ ಕಳೆದರೂ ದುರಸ್ತಿ ಮಾಡದೇ ಇರುವುದರಿಂದ ಇಲ್ಲಿನ ಜನರು ರಾತ್ರಿಯ ವೇಳೆ ಬೀದಿ ದೀಪವಿಲ್ಲದೇ ಮನೆಯಿಂದ ಹೊರ ಬರಲು ಭಯಪಡುವಂತಾಗಿದೆ.
ಈ ಬಗ್ಗೆ ನಗರ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೆ ಬೀದಿ ದೀಪದ ಬ್ರಾಕೆಟ್ ಮುರಿದು ಹೋಗಿರುವುದರಿಂದ ಅದನ್ನು ಚಾಮುಂಡೇಶ್ವರಿ ವಿದ್ಯುತ್ ನಿಗಮ(ಸೆಸ್ಕ್)ದವರೇ ಅಳವಡಿಸಬೇಕು ಎಂದು ಹೇಳುತ್ತಾರೆ. ಇತ್ತ ಸೆಸ್ಕ್ನವರಿಗೆ ಹಲವಾರು ಬಾರಿ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಬಡಾವಣೆಯ ಜನರಿಗೆ ರಾತ್ರಿ ವೇಳೆ ಸಂಚರಿಸಲು ತೀವ್ರ ತೊಂದರೆಯಾಗಿದೆ. ಸೆಸ್ಕ್ನವರು ಕೂಡಲೇ ಬೀದಿ ದೀಪವನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
– ಕೆ.ವಿ.ಶ್ರೀನಿವಾಸ್, ಸರಸ್ವತಿ ಪುರಂ, ಮೈಸೂರು
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…