Andolana originals

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಗಾಡಿಯಲ್ಲಿ, ಮೊದಲೇ ಕಾಯ್ದಿರಿಸಿದ ಹವಾನಿಯಂತ್ರಿತ ಬೋಗಿಗಳನ್ನು ಜೋಡಿಸಿರುತ್ತಾರೆ ಎಂಬುದು ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ತಿಳಿದಿರುವುದಿಲ್ಲ.

ಹೀಗಾಗಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ರೈಲು ಗಾಡಿಯಲ್ಲಿ ಹವಾನಿಯಂತ್ರಿತ ಬೋಗಿಗಳನ್ನು ರೈಲು ಎಂಜಿನ್‌ನ ಹಿಂಭಾಗದಲ್ಲಿ ಅಥವಾ ರೈಲು ಗಾಡಿಯ ಕೊನೆಯಲ್ಲಿ ಜೋಡಣೆ ಮಾಡಿದರೆ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ. ಸಾಮಾನ್ಯವಾಗಿ ರೈಲು ಪ್ರಯಾಣಿಕರು ಪ್ಲಾಟ್ ರ್ಮ್ ನ ಮಧ್ಯದಲ್ಲಿ ನಿಂತಿರುತ್ತಾರೆ. ಈ ರೈಲು ಗಾಡಿಯು ಮುಖ್ಯ ರೈಲು ನಿಲ್ದಾಣದಲ್ಲಿ ಕೇವಲ ಐದು ನಿಮಿಷಗಳು ಮಾತ್ರ ನಿಲ್ಲುವುದರಿಂದ ಸಾಮಾನ್ಯ ವರ್ಗದ ಪ್ರಯಾಣಿಕರು ಯಾವ ಬೋಗಿಯನ್ನು ಹತ್ತಬೇಕು ಎಂದು ಪರದಾಡುತ್ತಿರುತ್ತಾರೆ ( ಈ ರೈಲು ಗಾಡಿಯು ಅಶೋಕ್‌ಪುರಂ ರೈಲು ನಿಲ್ದಾಣವನ್ನು ಬೆಳಿಗ್ಗೆ ೮.೨೦ ಕ್ಕೆ ಬಿಟ್ಟು ಮುಖ್ಯ ರೈಲು ನಿಲ್ದಾಣಕ್ಕೆ ೮.೩೦ ಕ್ಕೆ ಬಂದು , ೮.೩೫ ಕ್ಕೆ ಹೊರಡುತ್ತದೆ). ಸಾಮಾನ್ಯವಾಗಿ ಎಲ್ಲ ರೈಲು ಗಾಡಿಗಳಲ್ಲಿ ಮಧ್ಯದ ಐದಾರು ಬೋಗಿಗಳು ಕಾಯ್ದಿರಿಸಿದ ಹವಾನಿಯಂತ್ರಿತ ಬೋಗಿಗಳಾಗಿರುತ್ತವೆ. ಇದು ಆಗಾಗ್ಗೆ ಪ್ರಯಾಣ ಮಾಡುವ ಪ್ರಯಾಣಿಕರಿಗಷ್ಟೇ ತಿಳಿದಿರುತ್ತದೆ, ಕೆಲವು ಸಾಮಾನ್ಯ ಪ್ರಯಾಣಿಕರು ಬೋಗಿಯನ್ನು ಹುಡುಕಲು ಸಮಯ ಸಾಲದೇ ಸಮಸ್ಯೆ ಉಂಟಾಗುತ್ತಿದೆ.ಈ ಕಾರಣಕ್ಕಾಗಿ ಕಾಯ್ದಿರಿಸಿದ ಹವಾನಿಯಂತ್ರಿತ ಬೋಗಿಗಳನ್ನು ರೈಲಿನ ಕೊನೆಗೆ ಹಾಕುವುದರಿಂದ ಸಾಮಾನ್ಯ ವರ್ಗದ ರೈಲು ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

3 mins ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

8 mins ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

14 mins ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

4 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

4 hours ago