ಓದುಗರ ಪತ್ರ
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ ಮೆರಿಟ್ ಆಧಾರದ ಮೇಲೆ ಮಾಡದೇ ಶಾಸಕರ ಮಾತಿನಂತೆ ಬಿಇಒಗಳು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿ ಮಾಡುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಇದು ನುಂಗಲಾರದ ತುತ್ತಾಗಿದ್ದು , ಸಂಕಟಕ್ಕೆ ಸಿಲುಕಿದ್ದಾರೆ. ಶಾಲಾಭಿವೃದ್ಧಿ ಸಮಿತಿ (ಎಸ್ಡಿಎಂಸಿ) ಕಿರಿಕಿರಿ, ಊರಿನ ಗಣ್ಯರು, ಹಲವು ಪಕ್ಷಗಳ ಕಾರ್ಯಕರ್ತರು ಹಸ್ತಕ್ಷೇಪ ಮಾಡುತ್ತಿದ್ದು, ಮೆರಿಟ್ ಶಿಕ್ಷಕರ ನೇಮಕಾತಿ ಮಾಡದೇ ಶಾಸಕರ ಹಿಂಬಾಲಕರ ಸಂಬಂಽಗಳು ಹಾಗೂ ಇತರರನ್ನು ನೇಮಕಾತಿ ಮಾಡಲಾಗಿದೆ.
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಶಾಸಕರು ಹಸ್ತಕ್ಷೇಪ ಮಾಡದಂತೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯ ಜವಾಬ್ದಾರಿಯನ್ನು ಬಿಇಒ ಹಾಗೂ ಮುಖ್ಯ ಶಿಕ್ಷಕರಿಗೆ ವಹಿಸಬೇಕಾಗಿದೆ.
– ಮಹಾಂತೇಶ್, ಧಾರವಾಡ
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…