ಓದುಗರ ಪತ್ರ
ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ ಮೆರಿಟ್ ಆಧಾರದ ಮೇಲೆ ಮಾಡದೇ ಶಾಸಕರ ಮಾತಿನಂತೆ ಬಿಇಒಗಳು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿ ಮಾಡುತ್ತಿದ್ದಾರೆ.
ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಇದು ನುಂಗಲಾರದ ತುತ್ತಾಗಿದ್ದು , ಸಂಕಟಕ್ಕೆ ಸಿಲುಕಿದ್ದಾರೆ. ಶಾಲಾಭಿವೃದ್ಧಿ ಸಮಿತಿ (ಎಸ್ಡಿಎಂಸಿ) ಕಿರಿಕಿರಿ, ಊರಿನ ಗಣ್ಯರು, ಹಲವು ಪಕ್ಷಗಳ ಕಾರ್ಯಕರ್ತರು ಹಸ್ತಕ್ಷೇಪ ಮಾಡುತ್ತಿದ್ದು, ಮೆರಿಟ್ ಶಿಕ್ಷಕರ ನೇಮಕಾತಿ ಮಾಡದೇ ಶಾಸಕರ ಹಿಂಬಾಲಕರ ಸಂಬಂಽಗಳು ಹಾಗೂ ಇತರರನ್ನು ನೇಮಕಾತಿ ಮಾಡಲಾಗಿದೆ.
ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಶಾಸಕರು ಹಸ್ತಕ್ಷೇಪ ಮಾಡದಂತೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯ ಜವಾಬ್ದಾರಿಯನ್ನು ಬಿಇಒ ಹಾಗೂ ಮುಖ್ಯ ಶಿಕ್ಷಕರಿಗೆ ವಹಿಸಬೇಕಾಗಿದೆ.
– ಮಹಾಂತೇಶ್, ಧಾರವಾಡ
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…