ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ ಪರಿಶಿಷ್ಟ ಜಾತಿಯ ೧೨ಜನ ರೈತರಿಗೆ ಜಮೀನನ್ನು ಮಂಜೂರು ಮಾಡಲಾಗಿತ್ತು. ನೀರಿನ ಕೊರತೆ ಹಾಗೂ ಮಳೆಯ ಅಭಾವದಿಂದ ನಾಲ್ಕಾರು ವರ್ಷ ರೈತರು ೩೬ ಎಕರೆ ಪ್ರದೇಶದಲ್ಲಿ ವ್ಯವಸಾಯ ಮಾಡದೇ ಖಾಲಿ ಬಿಟ್ಟಿದ್ದರು.
ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಒಂದಿಬ್ಬರು ಅನಧಿಕೃತವಾಗಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದಾರೆ. ಮೂಲ ಮಂಜೂರಾತಿದಾರರು ವ್ಯವಸಾಯ ಮಾಡಲು ಹೋದಾಗ ದಬ್ಬಾಳಿಕೆಯಿಂದ ಜಮೀನನ್ನು ಬಿಟ್ಟುಕೊಡದೆ ವ್ಯವಸಾಯ ಮಾಡುತ್ತಿರುತ್ತಾರೆ. ಸದರಿ ಜಮೀನನ್ನು ಮೂಲ ಮಂಜೂರಾತಿದಾರರಿಗೆ ಹಿಂದಿರುಗಿಸಲು ಕ್ರಮ ಕೈಗೊಳ್ಳುವಂತೆ ಕೊಳ್ಳೇಗಾಲ ಉಪವಿಭಾಗಾಧಿಕಾರಿಯವರು ಆದೇಶ ನೀಡಿದ್ದು, ಸದರಿ ಆದೇಶದಂತೆ ಕ್ರಮ ಕೈಗೊಳ್ಳದೆ ಕಂದಾಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಗ್ಗೆ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಮುಖ್ಯಮಂತ್ರಿಗಳು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈಗಲಾದರೂ ಭೂಮಿಯಲ್ಲಿ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಬೇಕಾಗಿದೆ.
-ಆರ್.ಮಹದೇವಯ್ಯ, ಆಲೂರು ಗ್ರಾಮ, ಚಾ.ನಗರ ತಾ
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…