Andolana originals

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು. ಹಾಗಾಗಿ ಬಡಾವಣೆಯ ಎಲ್ಲರೂ ಪಿನ್ ಕೋಡ್ ೫೭೦೦೨೨ ಎಂದೇ ಬಳಸುತ್ತಿದ್ದಾರೆ.

ಅಂಚೆ ಇಲಾಖೆಯವರು ಈ ಹಿಂದೆ ಇದ್ದ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಯ ಪಿನ್ ಕೋಡ್ ೫೭೦೦೨೨ ಅನ್ನು ರಾಮಕೃಷ್ಣ ನಗರಕ್ಕೆ ಮಾತ್ರ ಸೀಮಿತಗೊಳಿಸಿ, ದಟ್ಟಗಳ್ಳಿಗೆ ಹೊಸ ಪಿನ್ ಕೋಡ್ ೫೭೦೦೩೩ ಎಂದು ಬದಲಾವಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಯನ್ನೂ ನೀಡಲಾಗಿತ್ತು. ಆದರೆ ಬಡಾವಣೆಯ ಬಹುತೇಕ ನಿವಾಸಿಗಳಿಗೆ ಈ ಬದಲಾವಣೆ ಗಮನಕ್ಕೆ ಬಂದಿಲ್ಲ. ಬಂದಿದ್ದರೂ ಈಗಾಗಲೇ ತಮ್ಮ ಆಧಾರ್ ಸೇರಿದಂತೆ ಮನೆ ವಿಳಾಸವೆಲ್ಲವೂ ಹಳೆಯ ಪಿನ್ ೫೭೦೦೨೨ ಎಂದು ಇರುವುದರಿಂದ ಈಗಲೂ ದಾಖಲೆ, ವಿಳಾಸದಲ್ಲಿ ಅದೇ ಸಂಖ್ಯೆಯನ್ನು ನಮೂದಿಸಿ ವ್ಯವಹಾರ ಮಾಡುತ್ತಿದ್ದಾರೆ. ಆದರೆ ಈಗ ಪಿನ್ ಕೋಡ್ ಬದಲಾವಣೆಯಾಗಿರುವುದರಿಂದ ಅದನ್ನು ಪಾಸ್ ಪೋರ್ಟ್, ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಮೈಸೂರು ಒನ್ ಕೇಂದ್ರದಲ್ಲಿ ಕೇಳಿದರೆ ಅದು ಅಪ್ ಡೇಟ್ ಆಗಿಲ್ಲ ಎನ್ನುತ್ತಾರೆ. ಗ್ಯಾಸ್ ಏಜೆನ್ಸಿಯವರನ್ನು ಪಿನ್ ಕೋಡ್ ಬದಲಾವಣೆ ಮಾಡುವುದು ಅಂಚೆ ಕಚೇರಿಯವರ ಕೆಲಸ ಎಂದು ಹೇಳುತ್ತಿದ್ದಾರೆ. ಈ ಸಂಬಂಧ ಮೈಸೂರು ವಿಭಾಗೀಯ ಅಂಚೆ ಕಚೇರಿಗೆ ದೂರವಾಣಿ ಕರೆ ಮಾಡಿದರೆ ದಟ್ಟಗಳ್ಳಿಯ ಪಿನ್ ಕೋಡ್ ಬದಲಾವಣೆಯ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳುತ್ತಾರೆ.

ಇನ್ನು ಗ್ಯಾಸ್ ಏಜೆನ್ಸಿಯವರನ್ನು ವಿಳಾಸದಲ್ಲಿ ಪಿನ್ ಕೋಡ್ ಬದಲಾವಣೆ ಮಾಡಲು ಕೋರಿದರೆ ಬದಲಾವಣೆಯನ್ನು ಸಿಸ್ಟಮ್ ತೆಗೆದುಕೊಳ್ಳುತ್ತಿಲ್ಲ, ಅದು ಪೋಸ್ಟ್ ಆಫೀಸ್, ಕೇಂದ್ರ ಸರ್ಕಾರದ ಕಡೆಯಿಂದ ಅಪ್ ಡೇಟ್ ಆಗಬೇಕು ಎನ್ನುತ್ತಾರೆ. ಒಂದು ಸಣ್ಣ ಸಮಸ್ಯೆಯನ್ನು ಪರಿಹಾರ ಮಾಡಲು ಇಲಾಖೆಗಳು ಹೇಗೆ ಜನರನ್ನು ಸತಾಯಿಸುತ್ತವೆ ಎನ್ನುವುದಕ್ಕೆ ಇದು ಒಂದು ನಿದರ್ಶನವಷ್ಟೇ. ಸಂಬಂಧಟ್ಟವರು ಈಗಲಾದರೂ ಪಿನ್‌ಕೋಡ್ ಸಮಸ್ಯೆಯನ್ನು ನಿವಾರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಪ್ರಕಾಶ್ ಮುಳ್ಳೂರು, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago