ಇತ್ತೀಚಿನ ದಿನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಹುಲಿ ದಾಳಿಗೂ, ಮಾನವ-ವನ್ಯಜೀವಿ ಸಂಘರ್ಷಕ್ಕೂ ಸಫಾರಿಯೇ ನೇರ ಕಾರಣ ಎಂಬುದಕ್ಕೆ ಯಾವುದೇ ಪುರಾವೆಗಳಾಗಲಿ, ಸೂಕ್ತ ಉತ್ತರವಾಗಲಿ ಇಲ್ಲ ಎಂದು ವನ್ಯಜೀವಿ ತಜ್ಞರು ಹೇಳಿದ್ದಾರೆ. ಆದರೂ ಸಫಾರಿ ಬಂದ್ ಮಾಡಿರುವುದು ವಿಪರ್ಯಾಸ.
ಸಫಾರಿ ಬಂದ್ ಆಗಿರುವುದರಿಂದ ಅದನ್ನೇ ಅವಲಂಬಿಸಿ ಬದುಕು ನಡೆಸುತ್ತಿರುವ ಸಫಾರಿ ಗೈಡ್ಗಳು, ಚಾಲಕರು, ರೆಸಾರ್ಟ್ ಕಾರ್ಮಿಕರು, ಟೀ ಅಂಗಡಿಗಳು, ಹೋಟೆಲ್ ಕಾರ್ಮಿಕರು ಮತ್ತು ಮಾಲೀಕರು ಹಾಗೂ ಈ ಭಾಗದ ಕೆಲವು ಸಣ್ಣಪುಟ್ಟ ವ್ಯಾಪಾರಸ್ಥರನ್ನು ಒಳಗೊಂಡಂತೆ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಆದ್ದರಿಂದ ಸ್ಥಗಿತಗೊಂಡಿರುವ ಸಫಾರಿಯನ್ನು ಸೂಕ್ತ ಭದ್ರತೆಯೊಂದಿಗೆ ಮತ್ತೆ ಆರಂಭಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
-ಅನಿಲ್ ಮಳಲಿ, ಹೆಚ್. ಡಿ. ಕೋಟೆ
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…
ವಾಷಿಂಗ್ಟನ್: ಅಮೇರಿಕಾ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್…
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…