ಓದುಗರ ಪತ್ರ
ಮೈಸೂರಿನ ಕುವೆಂಪು ನಗರದ, ವಿಶ್ವ ಮಾನವ ಜೋಡಿ ರಸ್ತೆಯಲ್ಲಿರುವ ಕುವೆಂಪು ಉದ್ಯಾನವನದ, ಕುವೆಂಪು ಪುತ್ತಳಿಯ ಕೆಳಭಾಗದಲ್ಲಿ, ಸುಮಾರು ಹತ್ತು ವರ್ಷಗಳ ಹಿಂದೆ, ಅಂದಿನ ನಗರ ಪಾಲಿಕೆಯ ಸದಸ್ಯರಾಗಿದ್ದ ಕೆ.ವಿ.ಮಲ್ಲೇಶ್ ರವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಕುವೆಂಪು ಪುತ್ತಳಿಯನ್ನು ಅನಾವರಣ ಮಾಡುವ ಸಂದರ್ಭ ದಲ್ಲೇ ಇದರ ಕೆಳಭಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಾರ್ವಜನಿಕ ಗ್ರಂಥಾಲಯವನ್ನು ತೆರೆಯಲಾಗಿತ್ತು, ವಿದ್ಯಾರ್ಥಿಗಳು, ಹಾಗೂ ಹಿರಿಯ ನಾಗರಿಕರು ಸೇರಿದಂತೆ ನೂರಾರು ಜನರು ಇದರ ಉಪಯೋಗ ಪಡೆಯುತ್ತಿದ್ದರು. ಕರೋನ ಮಹಾಮಾರಿಯ ನಂತರ ಅಂದರೆ ಕಳೆದ ಐದು ವರ್ಷಗಳಿಂದ ಈ ಗ್ರಂಥಾಲಯವನ್ನು ಸಂಪೂರ್ಣವಾಗಿ ಮುಚ್ಚಿದ್ದಾರೆ, ಕೇಂದ್ರ ಗ್ರಂಥಾಲಯದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಈ ಗ್ರಂಥಾಲಯವನ್ನು, ಪುನಃ ತೆರೆದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…