Mysore
18
few clouds

Social Media

ಗುರುವಾರ, 12 ಫೆಬ್ರವರಿ 2026
Light
Dark

ಓದುಗರ ಪತ್ರ: ದೃಶ್ಯ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕಿದೆ

ಓದುಗರ ಪತ್ರ

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್‌ಗಿಂತಲೂ ಭಯಂಕರವಾಗಿ, ವರ್ಣರಂಜಿತವಾಗಿ ವ್ಯಾಖ್ಯಾನ ಮಾಡಿ ಜನರಲ್ಲಿ ಭೀತಿ ಹುಟ್ಟಿಸುತ್ತಿವೆ. ಆದ್ದರಿಂದ ಸರ್ಕಾರ ಖಾಸಗಿ ದೃಶ್ಯ ಮಾಧ್ಯಮಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.

ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು

Tags:
error: Content is protected !!