ಓದುಗರ ಪತ್ರ
ದಸರಾ ಉದ್ಘಾಟನೆ ದಿನ ಸಾರ್ವಜನಿಕರಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ . ಇದು ಸರ್ಕಾರದ ಭದ್ರತೆ ವೈಫಲ್ಯತೆಯನ್ನು ಎತ್ತಿ ತೋರಿಸುತ್ತಿದೆ. ಈಗಾಗಲೇ ಪೊಲೀಸ್ ಇಲಾಖೆಯವರು ಚಾಮುಂಡಿ ಬೆಟ್ಟದ ನಿವಾಸಿಗಳ ಸಭೆ ಕರೆದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಬೇಕು, ತಮ್ಮ ಮನೆಗೆ ಯಾರಾದರೂ ಹೊಸದಾಗಿ ಬಂದರೆ ನಮಗೆ ತಿಳಿಸಬೇಕು. ತಾವೆಲ್ಲರೂ ದಸರಾ ಉದ್ಘಾಟನೆ ದಿನ ಹೊರಗೆ ಬರಬಾರದು, ದಸರಾ ಉದ್ಘಾಟನೆಯನ್ನು ಟಿವಿಯಲ್ಲಿ ನೋಡಿಕೊಳ್ಳಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ.
ಇದೆಲ್ಲವನ್ನೂ ಗಮನಿಸಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ನಡೆಯುತ್ತಿದ್ದಂತಹ ದಸರಾ ಜನರ ದಸರಾ ಆಗಿತ್ತು, ಆದರೆ ಈಗ ನಡೆಯುತ್ತಿರುವ ದಸರಾ ಸರ್ಕಾರದ ತುಘಲಕ್ ದರ್ಬಾರಿನ ದಸರಾ ಆಗಿದೆಯೇ ಎಂಬ ಸಂಶಯ ಮೂಡಿದೆ. ದಸರಾ ಉದ್ಘಾಟನೆ ಕಾರ್ಯಕ್ರಮ ಜನಪ್ರತಿನಿಽಗಳಿಗೆ ಮತ್ತು ಅಧಿಕಾರಿಗಳ ಕುಟುಂಬಗಳಿಗೆ ಮಾತ್ರ ಸೀಮಿತವಾಗಿದೆ. ಈ ರೀತಿಯ ದಸರಾ ನಮಗೆ ಬೇಕಿತ್ತಾ ಎಂಬ ಯಕ್ಷಪ್ರಶ್ನೆ ಕಾಡುತ್ತಿದೆ.
ಸರ್ಕಾರದ ಈ ನಿರ್ಧಾರವನ್ನು ನೋಡಿದರೆ ದಸರಾ ಮೆರವಣಿಗೆ ವೀಕ್ಷಿಸಲು ಬರುವ ಲಕ್ಷಾಂತರ ಜನರಿಗೆ ಯಾವ ರೀತಿಯ ಭದ್ರತೆ ಕೊಡುತ್ತದೆ ಎಂಬುದು ಪ್ರಶ್ನೆಯಾಗಿದೆ. ಹೋರಾಟಗಾರರು ಉಗ್ರಗಾಮಿಗಳಲ್ಲ, ಅವರೆಲ್ಲರನ್ನೂ ಕರೆದು ಸಭೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕಾದದ್ದು ಸರ್ಕಾರದ ಕರ್ತವ್ಯ. ಸಾರ್ವಜನಿಕರಿಗೆ ಪ್ರವೇಶವಿಲ್ಲವೆಂದರೆ ಅದು ಸರ್ಕಾರಕ್ಕೆ ಅವಮಾನ. ಸರ್ಕಾರ ಎಚ್ಚೆತ್ತು ಕೂಡಲೇ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದು ಘೋಷಿಸಲಿ.
-ಎಸ್. ಬಾಲಕೃಷ್ಣ,ಅಧ್ಯಕ್ಷರು, ಮೈಸೂರು ಕನ್ನಡ ವೇದಿಕೆ
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…