ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್), ಬೋಸ್ಟನ್ ಮ್ಯೂಜಿ ಯಮ್ ಆಫ್ ಫೈನ್ ಆರ್ಟ್ (ಅಮೆರಿಕ) ಮತ್ತು ಏಷಿಯನ್ ಆರ್ಟ್ ಮ್ಯೂಜಿಯಮ್ (ಸಾನ್ ಫ್ರಾನ್ಸಿಸ್ಕೋ)ಗಳಲ್ಲಿ ಹಲವಾರು ವರ್ಷಗಳಿಂದ ಉಳಿದುಕೊಂಡಿವೆ. ಇವುಗಳು ಹೊಯ್ಸಳ, ವಿಜಯನಗರ ಮತ್ತು ಚಾಲುಕ್ಯರ ಕಾಲಘಟ್ಟಗಳ ಶಿಲ್ಪಕಲೆಯ ಅತ್ಯುತ್ತಮ ಉದಾಹರಣೆಗಳಾಗಿವೆ. ಈ ಶಿಲ್ಪಗಳು ಕೇವಲ ಕಲೆಯ ಪ್ರತಿಬಿಂಬವಲ್ಲ, ಅವು ನಮ್ಮ ಧಾರ್ಮಿಕ ಹಾಗೂ ಐತಿಹಾಸಿಕ ಪರಂಪರೆಯ ಭಾಗವಾಗಿವೆ. ಈ ಶಿಲ್ಪಗಳನ್ನು ಕರ್ನಾಟಕಕ್ಕೆ ವಾಪಸ್ ಪಡೆದು ನಮ್ಮ ಕಲಾ ಸಂಗ್ರಹಗಳಲ್ಲಿ ಪ್ರದರ್ಶಿಸುವುದರಿಂದ, ನಮ್ಮ ಸಂಸ್ಕೃತಿಯ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬಹುದು. ಆದರಿಂದ ನಮ್ಮ ಕರ್ನಾಟಕ ಸರ್ಕಾರ ಈ ಅಮೂಲ್ಯವಾದ ಶಿಲ್ಪಗಳನ್ನು ಮತ್ತು ಕಲಾಕೃತಿಗಳನ್ನು ಹಿಂಪಡೆಯಲು ಮುಂದಾಗಬೇಕು.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…