Andolana originals

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್), ಬೋಸ್ಟನ್ ಮ್ಯೂಜಿ ಯಮ್ ಆಫ್ ಫೈನ್ ಆರ್ಟ್ (ಅಮೆರಿಕ) ಮತ್ತು ಏಷಿಯನ್ ಆರ್ಟ್ ಮ್ಯೂಜಿಯಮ್ (ಸಾನ್ ಫ್ರಾನ್ಸಿಸ್ಕೋ)ಗಳಲ್ಲಿ ಹಲವಾರು ವರ್ಷಗಳಿಂದ ಉಳಿದುಕೊಂಡಿವೆ. ಇವುಗಳು ಹೊಯ್ಸಳ, ವಿಜಯನಗರ ಮತ್ತು ಚಾಲುಕ್ಯರ ಕಾಲಘಟ್ಟಗಳ ಶಿಲ್ಪಕಲೆಯ ಅತ್ಯುತ್ತಮ ಉದಾಹರಣೆಗಳಾಗಿವೆ. ಈ ಶಿಲ್ಪಗಳು ಕೇವಲ ಕಲೆಯ ಪ್ರತಿಬಿಂಬವಲ್ಲ, ಅವು ನಮ್ಮ ಧಾರ್ಮಿಕ ಹಾಗೂ ಐತಿಹಾಸಿಕ ಪರಂಪರೆಯ ಭಾಗವಾಗಿವೆ. ಈ ಶಿಲ್ಪಗಳನ್ನು ಕರ್ನಾಟಕಕ್ಕೆ ವಾಪಸ್ ಪಡೆದು ನಮ್ಮ ಕಲಾ ಸಂಗ್ರಹಗಳಲ್ಲಿ ಪ್ರದರ್ಶಿಸುವುದರಿಂದ, ನಮ್ಮ ಸಂಸ್ಕೃತಿಯ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬಹುದು. ಆದರಿಂದ ನಮ್ಮ ಕರ್ನಾಟಕ ಸರ್ಕಾರ ಈ ಅಮೂಲ್ಯವಾದ ಶಿಲ್ಪಗಳನ್ನು ಮತ್ತು ಕಲಾಕೃತಿಗಳನ್ನು ಹಿಂಪಡೆಯಲು ಮುಂದಾಗಬೇಕು.

-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

1 hour ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

1 hour ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

1 hour ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

1 hour ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

2 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

2 hours ago