Andolana originals

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ ಸಂಗೀತ ಕಾರಂಜಿ ನೋಡಲು ಸೇರಿದ್ದ ದೇಶ, ವಿದೇಶಗಳ ಸಾವಿರಾರು ಪ್ರವಾಸಿಗರಿಗೆ ನಿರಾಸೆಯಾಗಿದೆ.

ಇದರಿಂದ ಬೇಸತ್ತು ಅವರು ಟಿಕೆಟ್ ಹಣ ವಾಪಸ್ ನೀಡುವಂತೆ ಪ್ರತಿಭಟನೆ ನಡೆಸಿರುವುದು, ಇಲಾಖೆ ಹಾಗೂ ಸಿಬ್ಬಂದಿ ಹಣ ವಾಪಸ್ ನೀಡಲು ನಿರಾಕರಿಸಿರುವುದು, ಕರ್ನಾಟಕ ಕೈಗಾರಿಕಾ ಪಡೆ ಹಾಗೂ ಸಿವಿಲ್ ಪೊಲೀಸ್ ಸಿಬ್ಬಂದಿ ಪ್ರವಾಸಿಗರನ್ನು ಹೊರ ದಬ್ಬಿರುವುದು ಕೂಡ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಿನಿಮಾ ಷೋ, ಕ್ರಿಕೆಟ್ ಪಂದ್ಯ ರದ್ದಾದರೆ ಅಥವಾ ಸೇವೆಯಲ್ಲಿ ಲೋಪವಾದರೆ ಹಣ ವಾಪಸ್ ನೀಡುವ ನಿಯಮವಿದೆ. ಆದರೆ ಸರ್ಕಾರಿ ಇಲಾಖೆ ಅಥವಾ ಗುತ್ತಿಗೆದಾರರು ಇಂತಹ ಸಂದರ್ಭದಲ್ಲಿ ಹಣ ವಾಪಸ್ ನೀಡದೇ ಇರುವುದು ಖಂಡನೀಯ.

ಮುಂದಿನ ದಿನಗಳಲ್ಲಿ ಕೆಆರ್‌ಎಸ್ ಬೃಂದಾವನದಲ್ಲಿ ಇಂತಹ ಲೋಪಗಳಾದಾಗ ಪ್ರವಾಸಿಗರಿಗೆ ಟಿಕೆಟ್ ಹಣ ಹಿಂದಿರುಗಿಸುವ ವ್ಯವಸ್ಥೆಯನ್ನು ಇಲಾಖೆ ನೀಡುವಂತೆ ಸರ್ಕಾರ ಆದೇಶ ಮಾಡಲಿ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ , ಮೈಸೂರು

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

11 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

12 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

17 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

18 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

24 hours ago