ವಿಶ್ವವಿಖ್ಯಾತ ಕೆ ಆರ್ಎಸ್ನ ಬೃಂದಾವನ ಗಾರ್ಡನ್ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ ಸಂಗೀತ ಕಾರಂಜಿ ನೋಡಲು ಸೇರಿದ್ದ ದೇಶ, ವಿದೇಶಗಳ ಸಾವಿರಾರು ಪ್ರವಾಸಿಗರಿಗೆ ನಿರಾಸೆಯಾಗಿದೆ.
ಇದರಿಂದ ಬೇಸತ್ತು ಅವರು ಟಿಕೆಟ್ ಹಣ ವಾಪಸ್ ನೀಡುವಂತೆ ಪ್ರತಿಭಟನೆ ನಡೆಸಿರುವುದು, ಇಲಾಖೆ ಹಾಗೂ ಸಿಬ್ಬಂದಿ ಹಣ ವಾಪಸ್ ನೀಡಲು ನಿರಾಕರಿಸಿರುವುದು, ಕರ್ನಾಟಕ ಕೈಗಾರಿಕಾ ಪಡೆ ಹಾಗೂ ಸಿವಿಲ್ ಪೊಲೀಸ್ ಸಿಬ್ಬಂದಿ ಪ್ರವಾಸಿಗರನ್ನು ಹೊರ ದಬ್ಬಿರುವುದು ಕೂಡ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸಿನಿಮಾ ಷೋ, ಕ್ರಿಕೆಟ್ ಪಂದ್ಯ ರದ್ದಾದರೆ ಅಥವಾ ಸೇವೆಯಲ್ಲಿ ಲೋಪವಾದರೆ ಹಣ ವಾಪಸ್ ನೀಡುವ ನಿಯಮವಿದೆ. ಆದರೆ ಸರ್ಕಾರಿ ಇಲಾಖೆ ಅಥವಾ ಗುತ್ತಿಗೆದಾರರು ಇಂತಹ ಸಂದರ್ಭದಲ್ಲಿ ಹಣ ವಾಪಸ್ ನೀಡದೇ ಇರುವುದು ಖಂಡನೀಯ.
ಮುಂದಿನ ದಿನಗಳಲ್ಲಿ ಕೆಆರ್ಎಸ್ ಬೃಂದಾವನದಲ್ಲಿ ಇಂತಹ ಲೋಪಗಳಾದಾಗ ಪ್ರವಾಸಿಗರಿಗೆ ಟಿಕೆಟ್ ಹಣ ಹಿಂದಿರುಗಿಸುವ ವ್ಯವಸ್ಥೆಯನ್ನು ಇಲಾಖೆ ನೀಡುವಂತೆ ಸರ್ಕಾರ ಆದೇಶ ಮಾಡಲಿ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ , ಮೈಸೂರು
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…