ವಿಶ್ವವಿಖ್ಯಾತ ಕೆ ಆರ್ಎಸ್ನ ಬೃಂದಾವನ ಗಾರ್ಡನ್ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ ಸಂಗೀತ ಕಾರಂಜಿ ನೋಡಲು ಸೇರಿದ್ದ ದೇಶ, ವಿದೇಶಗಳ ಸಾವಿರಾರು ಪ್ರವಾಸಿಗರಿಗೆ ನಿರಾಸೆಯಾಗಿದೆ.
ಇದರಿಂದ ಬೇಸತ್ತು ಅವರು ಟಿಕೆಟ್ ಹಣ ವಾಪಸ್ ನೀಡುವಂತೆ ಪ್ರತಿಭಟನೆ ನಡೆಸಿರುವುದು, ಇಲಾಖೆ ಹಾಗೂ ಸಿಬ್ಬಂದಿ ಹಣ ವಾಪಸ್ ನೀಡಲು ನಿರಾಕರಿಸಿರುವುದು, ಕರ್ನಾಟಕ ಕೈಗಾರಿಕಾ ಪಡೆ ಹಾಗೂ ಸಿವಿಲ್ ಪೊಲೀಸ್ ಸಿಬ್ಬಂದಿ ಪ್ರವಾಸಿಗರನ್ನು ಹೊರ ದಬ್ಬಿರುವುದು ಕೂಡ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸಿನಿಮಾ ಷೋ, ಕ್ರಿಕೆಟ್ ಪಂದ್ಯ ರದ್ದಾದರೆ ಅಥವಾ ಸೇವೆಯಲ್ಲಿ ಲೋಪವಾದರೆ ಹಣ ವಾಪಸ್ ನೀಡುವ ನಿಯಮವಿದೆ. ಆದರೆ ಸರ್ಕಾರಿ ಇಲಾಖೆ ಅಥವಾ ಗುತ್ತಿಗೆದಾರರು ಇಂತಹ ಸಂದರ್ಭದಲ್ಲಿ ಹಣ ವಾಪಸ್ ನೀಡದೇ ಇರುವುದು ಖಂಡನೀಯ.
ಮುಂದಿನ ದಿನಗಳಲ್ಲಿ ಕೆಆರ್ಎಸ್ ಬೃಂದಾವನದಲ್ಲಿ ಇಂತಹ ಲೋಪಗಳಾದಾಗ ಪ್ರವಾಸಿಗರಿಗೆ ಟಿಕೆಟ್ ಹಣ ಹಿಂದಿರುಗಿಸುವ ವ್ಯವಸ್ಥೆಯನ್ನು ಇಲಾಖೆ ನೀಡುವಂತೆ ಸರ್ಕಾರ ಆದೇಶ ಮಾಡಲಿ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ , ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…