ಓದುಗರ ಪತ್ರ
ಚಿನ್ನ ಕಳ್ಳಸಾಗಾಣಿಕೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಡಿಆರ್ಐ ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದು, ಅವರನ್ನು ಬಳಸಿಕೊಂಡು ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಜಾಲದ ಜೊತೆ ರಾಜ್ಯದ ಇಬ್ಬರು ಪ್ರಭಾವಿ ಸಚಿವರ ನಂಟೂ ಇದೆ ಎಂಬ ಶಂಕೆ ವ್ಯಕ್ತವಾಗಿದೆ.
ಡಿಆರ್ಐನ ಕಸ್ಟಮ್ಸ್ ಇಲಾಖೆಯ ತನಿಖೆ ವೇಳೆ ಇಬ್ಬರು ಪ್ರಭಾವಿ ಸಚಿವರ ಹೆಸರುಗಳು ಈ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಆದರೆ, ಅಧಿಕಾರಿಗಳು ಆ ಇಬ್ಬರು ಸಚಿವರ ಹೆಸರನ್ನು ಬಹಿರಂಗಪಡಿಸದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಸದ್ಯ ಈ ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಳ್ಳುತ್ತಿದ್ದು, ಅಲ್ಲಿಯೂ ಇಬ್ಬರು ಸಚಿವರು ಎಂದೇ ವರದಿಯಾಗುತ್ತಿದೆ. ಪರಿಣಾಮ ಜನತೆಗೆ ರಾಜ್ಯದ ಎಲ್ಲ ಸಚಿವರ ಮೇಲೂ ಅನುಮಾನ ಮೂಡುವಂತಾಗಿದೆ. ಆದ್ದರಿಂದ ತನಿಖಾ ಅಧಿಕಾರಿಗಳು ಹಾಗೂ ಮಾಧ್ಯಮದವರು ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಕರಣದಲ್ಲಿ ಶಾಮೀಲಾಗಿರುವ ಸಚಿವರ ಹೆಸರುಗಳನ್ನು ಬಹಿರಂಗಪಡಿಸಬೇಕಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…