Andolana originals

ಓದುಗರ ಪತ್ರ: ಸಚಿವರ ಹೆಸರನ್ನೂ ಬಹಿರಂಗಪಡಿಸಿ

ಚಿನ್ನ ಕಳ್ಳಸಾಗಾಣಿಕೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಡಿಆರ್‌ಐ ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದು, ಅವರನ್ನು ಬಳಸಿಕೊಂಡು ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಜಾಲದ ಜೊತೆ ರಾಜ್ಯದ ಇಬ್ಬರು ಪ್ರಭಾವಿ ಸಚಿವರ ನಂಟೂ ಇದೆ ಎಂಬ ಶಂಕೆ ವ್ಯಕ್ತವಾಗಿದೆ.

ಡಿಆರ್‌ಐನ ಕಸ್ಟಮ್ಸ್ ಇಲಾಖೆಯ ತನಿಖೆ ವೇಳೆ ಇಬ್ಬರು ಪ್ರಭಾವಿ ಸಚಿವರ ಹೆಸರುಗಳು ಈ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ. ಆದರೆ, ಅಧಿಕಾರಿಗಳು ಆ ಇಬ್ಬರು ಸಚಿವರ ಹೆಸರನ್ನು ಬಹಿರಂಗಪಡಿಸದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಸದ್ಯ ಈ ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಳ್ಳುತ್ತಿದ್ದು, ಅಲ್ಲಿಯೂ ಇಬ್ಬರು ಸಚಿವರು ಎಂದೇ ವರದಿಯಾಗುತ್ತಿದೆ. ಪರಿಣಾಮ ಜನತೆಗೆ ರಾಜ್ಯದ ಎಲ್ಲ ಸಚಿವರ ಮೇಲೂ ಅನುಮಾನ ಮೂಡುವಂತಾಗಿದೆ. ಆದ್ದರಿಂದ ತನಿಖಾ ಅಧಿಕಾರಿಗಳು ಹಾಗೂ ಮಾಧ್ಯಮದವರು ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಕರಣದಲ್ಲಿ ಶಾಮೀಲಾಗಿರುವ ಸಚಿವರ ಹೆಸರುಗಳನ್ನು ಬಹಿರಂಗಪಡಿಸಬೇಕಿದೆ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago