ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡಿರುವ ವಿಚಾರ ತೀವ್ರ ಗೊಂದಲ ಸೃಷ್ಟಿಸಿದ್ದು, ಬಡ ಜನರ ಆತಂಕಕ್ಕೆ ಕಾರಣವಾಗಿದೆ. ಆದಾಯ ಪಾವತಿಸುತ್ತಿದ್ದಾರೆ, ಬಡತನ ರೇಖೆಗಿಂತ ಮೇಲಿದ್ದಾರೆ ಎಂಬ ಕಾರಣಗಳನ್ನು ನೀಡಿ ರಾಜ್ಯ ಸರ್ಕಾರ 22 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ನಾವು ಅನರ್ಹ ಕಾರ್ಡುಗಳನ್ನು ಮಾತ್ರ ರದ್ದು ಮಾಡಿದ್ದೇವೆ, ಅರ್ಹ ಫಲಾನುಭವಿಗಳ ಬಿಪಿಎಲ್ ಪಡಿತರ ಚೀಟಿಗಳು ಮುಂದುವರಿಲಿವೆ, ಬಡ ವರ್ಗದ ಜನರಿಗೆ ಯಾವುದೇ ರೀತಿಯ ಮೋಸವಾಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಫಲಾನುಭವಿಗಳನ್ನು ಪರಿಷ್ಕರಣೆ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್ ದೃಢೀಕರಣ ಮಾಡದ ಅನೇಕ ಎಪಿಎಲ್ ಕಾರ್ಡ್ಗಳನ್ನೂ ರದ್ದು ಮಾಡಲಾಗಿದೆ.
ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಜನರು ಕೇವಲ ಯಾತರಕ್ಕಾಗಿ ಮಾತ್ರವಲ್ಲದೆ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಆಯುಷ್ಮಾನ್ ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ಪಡೆದುಕೊಳ್ಳಲು ಬಳಸುತ್ತಾರೆ. ಆದರೆ ಸರ್ಕಾರ ತೆರಿಗೆ ಪಾವತಿಸುತ್ತಾರೆ ಎಂದು ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿದರೆ ಅವರು ಪಡಿತರದ ಜತೆಗೆ ಅನೇಕ ಸೌಲಭ್ಯಗಳಿಂದಲೂ ವಂಚಿತರಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಮರುಪರಿಶೀಲಿಸಬೇಕಿದೆ.
-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…