ಓದುಗರ ಪತ್ರ
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ ಕೆಲವು ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂಭಾಗ ಸಾರ್ವಜನಿಕರು ಓಡಾಡುವ ಮುಖ್ಯ ರಸ್ತೆಯ ಪಾರ್ಕಿಂಗ್ ರಸ್ತೆಯಲ್ಲೇ ಕಬ್ಬಿಣದ ಬಾಕ್ಸ್ಗಳನ್ನು ಹಾಕಿದ್ದಾರೆ. ಕೆಲವು ವ್ಯಾಪಾರಿಗಳಂತೂ ತಮ್ಮ ಅಂಗಡಿಗಳ ಮುಂದೆ ಯಾವುದೇ ವಾಹನಗಳನ್ನು ನಿಲುಗಡೆ ಮಾಡಲು ಬಿಡುವುದಿಲ್ಲ. ಸಾರ್ವಜನಿಕರು ಪಾರ್ಕಿಂಗ್ ಮಾಡಲು ಹೋದರೆ, ಅಂಗಡಿ ಮಾಲೀಕರು ಜಗಳಕ್ಕೆ ಬರುತ್ತಾರೆ, ಅಂಗಡಿಯ ಮುಂದಿನ ಜಾಗ ನಮಗೆ ಸೇರಿದ್ದು ಎಂದು ವಾದಿಸುತ್ತಾರೆ, ಈ ವಿಚಾರವನ್ನು ಅಲ್ಲಿನ ಟ್ರಾಫಿಕ್ ಪೊಲೀಸರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ, ಅಂಗಡಿ ಮುಂದಿನ ರಸ್ತೆಯಲ್ಲಿ ಅಕ್ರಮವಾಗಿ ಹಾಕಿರುವ ಕಬ್ಬಿಣದ ಬಾಕ್ಸ್ಗಳನ್ನು ತೆರವುಗೊಳಿಸಿ ಸಾರ್ವಜನಿಕರ ವಾಹನ ನಿಲುಗಡೆಗೆ ಅನುಕೂಲ ಕಲ್ಪಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…