ಓದುಗರ ಪತ್ರ
ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ ಬರುತ್ತಿದ್ದು, ನಗರ ಬಸ್ ನಿಲ್ದಾಣದಿಂದ ಒಂಟಿ ಕೊಪ್ಪಲ್ ಮಾರ್ಗವಾಗಿ ಚಲಿಸುವ ಬಸ್ಸುಗಳು ಕೆ.ಆರ್.ಆಸ್ಪತ್ರೆಯಿಂದ ಬಂಬೂ ಬಜ಼ಾರ್ ಮುಖಾಂತರ ಆಕಾಶವಾಣಿ ಕಡೆಗೆ ಸಂಚರಿಸುತ್ತಿವೆ. ಇದರಿಂದ ರೈಲು ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಹಾಗೂ ರೈಲ್ವೆ ನಿಲ್ದಾಣದಿಂದ ಹೆಬ್ಬಾಳು, ಇಲವಾಲ, ಕೆಆರ್ಎಸ್ಗೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ. ಇದಲ್ಲದೆ ವಾರಾಂತ್ಯದಲ್ಲಿ ದ್ವಿಚಕ್ರ, ನಾಲ್ಕು ಚಕ್ರಗಳ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ಹಾಗಾಗಿ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗಿದೆ. ಕೆಲವರು ಅನಿವಾರ್ಯವಾಗಿ ಆಟೋದಲ್ಲಿ ದುಬಾರಿ ಹಣ ನೀಡಿ ಪ್ರಯಾಣಿಸುವಂತಾಗಿದೆ.
ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ಗೌಡ ಇದರ ಬಗ್ಗೆ ಮುತುವರ್ಜಿ ವಹಿಸಿ, ಆದಷ್ಟು ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…