ಓದುಗರ ಪತ್ರ
ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ ಬರುತ್ತಿದ್ದು, ನಗರ ಬಸ್ ನಿಲ್ದಾಣದಿಂದ ಒಂಟಿ ಕೊಪ್ಪಲ್ ಮಾರ್ಗವಾಗಿ ಚಲಿಸುವ ಬಸ್ಸುಗಳು ಕೆ.ಆರ್.ಆಸ್ಪತ್ರೆಯಿಂದ ಬಂಬೂ ಬಜ಼ಾರ್ ಮುಖಾಂತರ ಆಕಾಶವಾಣಿ ಕಡೆಗೆ ಸಂಚರಿಸುತ್ತಿವೆ. ಇದರಿಂದ ರೈಲು ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಹಾಗೂ ರೈಲ್ವೆ ನಿಲ್ದಾಣದಿಂದ ಹೆಬ್ಬಾಳು, ಇಲವಾಲ, ಕೆಆರ್ಎಸ್ಗೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ. ಇದಲ್ಲದೆ ವಾರಾಂತ್ಯದಲ್ಲಿ ದ್ವಿಚಕ್ರ, ನಾಲ್ಕು ಚಕ್ರಗಳ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ಹಾಗಾಗಿ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗಿದೆ. ಕೆಲವರು ಅನಿವಾರ್ಯವಾಗಿ ಆಟೋದಲ್ಲಿ ದುಬಾರಿ ಹಣ ನೀಡಿ ಪ್ರಯಾಣಿಸುವಂತಾಗಿದೆ.
ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ಗೌಡ ಇದರ ಬಗ್ಗೆ ಮುತುವರ್ಜಿ ವಹಿಸಿ, ಆದಷ್ಟು ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…