ಓದುಗರ ಪತ್ರ
ಮೈಸೂರಿನ ದಾಸಪ್ಪ ವೃತ್ತದಿಂದ ವಾಟರ್ ವರ್ಕ್ಸ್ವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಗರ ಸಾರಿಗೆ ಬಸ್ಸುಗಳು ಏಕಮುಖವಾಗಿ ಸಂಚರಿಸುವಂತಾಗಿದೆ. ಆಕಾಶವಾಣಿಯಿಂದ ನಗರ ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳು ಎಂದಿನಂತೆ ಬರುತ್ತಿದ್ದು, ನಗರ ಬಸ್ ನಿಲ್ದಾಣದಿಂದ ಒಂಟಿ ಕೊಪ್ಪಲ್ ಮಾರ್ಗವಾಗಿ ಚಲಿಸುವ ಬಸ್ಸುಗಳು ಕೆ.ಆರ್.ಆಸ್ಪತ್ರೆಯಿಂದ ಬಂಬೂ ಬಜ಼ಾರ್ ಮುಖಾಂತರ ಆಕಾಶವಾಣಿ ಕಡೆಗೆ ಸಂಚರಿಸುತ್ತಿವೆ. ಇದರಿಂದ ರೈಲು ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಹಾಗೂ ರೈಲ್ವೆ ನಿಲ್ದಾಣದಿಂದ ಹೆಬ್ಬಾಳು, ಇಲವಾಲ, ಕೆಆರ್ಎಸ್ಗೆ ತೆರಳುವ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗಿದೆ. ಇದಲ್ಲದೆ ವಾರಾಂತ್ಯದಲ್ಲಿ ದ್ವಿಚಕ್ರ, ನಾಲ್ಕು ಚಕ್ರಗಳ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ಹಾಗಾಗಿ ವಾಹನ ಚಾಲಕರಿಗೆ ತುಂಬಾ ತೊಂದರೆಯಾಗಿದೆ. ಕೆಲವರು ಅನಿವಾರ್ಯವಾಗಿ ಆಟೋದಲ್ಲಿ ದುಬಾರಿ ಹಣ ನೀಡಿ ಪ್ರಯಾಣಿಸುವಂತಾಗಿದೆ.
ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ಗೌಡ ಇದರ ಬಗ್ಗೆ ಮುತುವರ್ಜಿ ವಹಿಸಿ, ಆದಷ್ಟು ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…