ಓದುಗರ ಪತ್ರ
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ ದೇಶದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದೆ. ರಷ್ಯಾದಿಂದ ತೈಲಮ ಖರೀದಿಸಬಾರದು ಎಂಬ ಅಮೆರಿಕದ ಫರ್ಮಾನಿನ ನಡುವೆಯೇ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಆರ್ಥಿಕ ಮತ್ತು ವ್ಯಾಪಾರ ಪಾಲುದಾರಿಕೆಯನ್ನು ಮತ್ತಷ್ಟು ಬಲ ಪಡಿಸುವ ಉದ್ದೇಶದಿಂದ ‘ಮುನ್ನೋಟ- ೨೦೩೦’ ಎಂಬ ಒಪ್ಪಂದಕ್ಕೆ ಉಭಯ ದೇಶಗಳ ನಾಯಕರು ಸಹಿ ಹಾಕಿದ್ದಾರೆ. ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ವಿಮಾನ ನಿಲ್ದಾಣಕ್ಕೆ ತೆರಳಿ ಪುಟಿನ್ ಅವರನ್ನು ಸ್ವಾಗತಿಸಿದ್ದಾರೆ. ವಿಶ್ವ ಭೂಪಟದಲ್ಲಿ, ರಷ್ಯಾ ಹಾಗೂ ಭಾರತಕ್ಕೆ ತಮ್ಮದೇ ಆದ ವಿಶಿಷ್ಟ ರೀತಿಯ ಸ್ಥಾನಮಾನಗಳಿವೆ.
ಅಮೆರಿಕ ಮತ್ತು ಚೀನಾದ ನಂತರ ಅತ್ಯಂತ ಬಲಿಷ್ಠ ಮತ್ತು ಬಲಾಢ್ಯ ರಾಷ್ಟ್ರವೆನಿಸಿರುವ ರಷ್ಯಾ ಪರಮಾಣ ಅಸ್ತ್ರಗಳನ್ನು ಹೊಂದಿರುವ ದೇಶವಾಗಿದೆ. ಭಾರತ ಕೂಡ ಅತಿ ವೇಗದಲ್ಲಿ ಬೆಳೆಯುತ್ತಿರುವ ರಾಷ್ಟ್ರವಾಗಿದ್ದು, ವಿಶ್ವದ ನಾಲ್ಕನೆಯ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತ ಸೇರಿದಂತೆ ಅಮೆರಿಕದ ವಿಶ್ವದ ಹಲವಾರು ದೇಶಗಳ ಮೇಲೆ ದುಬಾರಿ ತೆರಿಗೆ ವಿಽಸಿ ಅಟ್ಟಹಾಸ ಮೆರೆಯುತ್ತಿರುವ ಸಂಧರ್ಭದಲ್ಲೇ ಭಾರತ ಮತ್ತು ರಷ್ಯಾ ಅತ್ಯಂತ ನಿಕಟ ಮಿತ್ರ ರಾಷ್ಟ್ರಗಳಾಗಿ ಹೊರಹೊಮ್ಮಿವೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…