Andolana originals

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ ದೇಶದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದೆ. ರಷ್ಯಾದಿಂದ ತೈಲಮ ಖರೀದಿಸಬಾರದು ಎಂಬ ಅಮೆರಿಕದ ಫರ್ಮಾನಿನ ನಡುವೆಯೇ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಆರ್ಥಿಕ ಮತ್ತು ವ್ಯಾಪಾರ ಪಾಲುದಾರಿಕೆಯನ್ನು ಮತ್ತಷ್ಟು ಬಲ ಪಡಿಸುವ ಉದ್ದೇಶದಿಂದ ‘ಮುನ್ನೋಟ- ೨೦೩೦’ ಎಂಬ ಒಪ್ಪಂದಕ್ಕೆ ಉಭಯ ದೇಶಗಳ ನಾಯಕರು ಸಹಿ ಹಾಕಿದ್ದಾರೆ. ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ವಿಮಾನ ನಿಲ್ದಾಣಕ್ಕೆ ತೆರಳಿ ಪುಟಿನ್ ಅವರನ್ನು ಸ್ವಾಗತಿಸಿದ್ದಾರೆ. ವಿಶ್ವ ಭೂಪಟದಲ್ಲಿ, ರಷ್ಯಾ ಹಾಗೂ ಭಾರತಕ್ಕೆ ತಮ್ಮದೇ ಆದ ವಿಶಿಷ್ಟ ರೀತಿಯ ಸ್ಥಾನಮಾನಗಳಿವೆ.

ಅಮೆರಿಕ ಮತ್ತು ಚೀನಾದ ನಂತರ ಅತ್ಯಂತ ಬಲಿಷ್ಠ ಮತ್ತು ಬಲಾಢ್ಯ ರಾಷ್ಟ್ರವೆನಿಸಿರುವ ರಷ್ಯಾ ಪರಮಾಣ ಅಸ್ತ್ರಗಳನ್ನು ಹೊಂದಿರುವ ದೇಶವಾಗಿದೆ. ಭಾರತ ಕೂಡ ಅತಿ ವೇಗದಲ್ಲಿ ಬೆಳೆಯುತ್ತಿರುವ ರಾಷ್ಟ್ರವಾಗಿದ್ದು, ವಿಶ್ವದ ನಾಲ್ಕನೆಯ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತ ಸೇರಿದಂತೆ ಅಮೆರಿಕದ ವಿಶ್ವದ ಹಲವಾರು ದೇಶಗಳ ಮೇಲೆ ದುಬಾರಿ ತೆರಿಗೆ ವಿಽಸಿ ಅಟ್ಟಹಾಸ ಮೆರೆಯುತ್ತಿರುವ ಸಂಧರ್ಭದಲ್ಲೇ ಭಾರತ ಮತ್ತು ರಷ್ಯಾ ಅತ್ಯಂತ ನಿಕಟ ಮಿತ್ರ ರಾಷ್ಟ್ರಗಳಾಗಿ ಹೊರಹೊಮ್ಮಿವೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago